M.net4.jpeg
  • ಕವರ್ ಸ್ಟೋರಿ

  • ಸ್ಟೇಟ್ ನ್ಯೂಸ್

  • ದೇಶ - ವಿದೇಶ

  • ಸಿಟಿಜನ್ ರಿಪೋರ್ಟರ್

  • ಅಂಕಣಗಳು

  • ಕಥನ ಕುತೂಹಲ

  • More

    • Facebook Social Icon
    • Twitter Social Icon
    • Google+ Social Icon
    • YouTube Social  Icon
    • Pinterest Social Icon
    • Instagram Social Icon
    RSS Feed
    ದೇಶ

    ಹಿರಿಯ ನಾಗರಿಕರ ಮೇಲೆ ಹಲ್ಲೆ, ಆಪ್ ಶಾಸಕನ ಬಂಧನ

    June 25, 2016

     ಆಮ್ ಆದ್ಮಿ ಪಕ್ಷದ ನೇತಾರರು ಒಬ್ಬರಾದ ಮೇಲೆ ಒಬ್ಬರಂತೆ ವಿವಾದದಲ್ಲಿ ಸಿಲುಕುತ್ತಿದ್ದಾರೆ. ಈಗ ಶಾಸಕ ದಿನೇಶ್ ಮೊಹಾನಿಯಾ ಸರದಿ. ಗುರುವಾರದಂದು (ಜೂನ್ 23) ಮಹಿಳೆಯೊಬ್ಬರು ತಮ್ಮ ಜೊತೆ ಅಸಭ್ಯವಾಗಿ ನಡೆದುಕೊಂಡಿದ್ದಾರೆಂದು ಮೊಹಾನಿಯಾ ವಿರುದ್ಧ ದೂರು ನೀಡಿದ್ದರು. ಅದರ ಬೆನ್ನಲ್ಲೇ ಈತನ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದ್ದು, ಇಂದು ಮೊಹಾನಿಯಾರನ್ನು ಬಂಧಿಸಲಾಗಿದೆ. ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆಂದು ದಕ್ಷಿಣ ದೆಹಲಿಯ ಹಿರಿಯ ನಾಗರಿಕರೊಬ್ಬರು ಈತನ ವಿರುದ್ಧ ನೆನ್ನೆ (ಜೂನ್24) ದೂರು ದಾಖಲಿಸಿದ್ದರು. 

     

    ದೆಹಲಿ ಜಲ ಮಂಡಳಿಯ ಉಪಾಧ್ಯಕ್ಷರೂ ಆಗಿರುವ ಮೊಹಾನಿಯಾ ನೆನ್ನೆ ತುಘಲಕಾಬಾದ್ ಬಡಾವಣೆಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ  ನೀರಿನ ಅಸಮರ್ಪಕ ಪೂರೈಕೆ ವಿರುದ್ಧ ದೂರು ಸಲ್ಲಿಸಲು ಗೋವಿಂದಪುರಿ ನಿವಾಸಿ, ಹಿರಿಯ ನಾಗರಿಕ ರಾಕೇಶ್ ಕುಮಾರ್ ಇತರ ಕೆಲವರೊಂದಿಗೆ ಮೊಹಾನಿಯಾರನ್ನು ಭೇಟಿಯಾಗಲು ತೆರಳಿದ್ದರು. ದೂರಿನಿಂದ ಕೆರಳಿದ ಮೊಹಾನಿಯಾ, ಸಾರ್ವಜನಿಕರ ಎದುರಲ್ಲೇ ರಾಕೇಶ್ ಕುಮಾರ್ ಅವರ ಕೆನ್ನೆಗೆ ಹೊಡೆದು ಅಲ್ಲಿಂದ ಹೊರಟುಬಿಟ್ಟಿದ್ದರು. ಇದರಿಂದ ತಮಗೆ ದೈಹಿಕ ಹಾಗೂ ಮಾನಸಿಕವಾಗಿ ಘಾಸಿಯಾಗಿದೆ ಎಂದು ರಾಕೇಶ್ ಕುಮಾರ್ ದೂರು ನೀಡಿದ್ದರು.

     

    ದೂರುಗಳ ಅನ್ವಯ ದೆಹಲಿ ಪೊಲೀಸರು ಮಹಿಳೆ ಜೊತೆಗಿನ ಅಸಭ್ಯ ವರ್ತನೆಯೂ ಸೇರಿದಂತೆ ಮೊಹಾನಿಯಾ ಮೇಲೆ ಸೆಕ್ಷನ್ 323,506 ಹಾಗೂ 509 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆದರೆ ಮೊಹಾನಿಯಾ ತಾವು ಯಾರೊಂದಿಗೂ ಅನುಚಿತವಾಗಿ ವರ್ತಿಸಿಲ್ಲವೆಂದೂ ತಮ್ಮ ವಿರುದ್ಧ ಪಿತೂರಿ ನಡೆಸಲಾಗ್ತಿದೆಯೆಂದೂ ಹೇಳಿಕೆ ನೀಡಿದ್ದಾರೆ.

    Tags:

    ದಿನೇಶ್ ಮೊಹಾನಿಯಾ

    ಆಮ್ ಆದ್ಮಿ ಪಕ್ಷ

    ಹಿರಿಯ ನಾಗರಿಕ

    ದೂರು

    Please reload

    ಅಮ್ಮ : ವೈಕ್ಕಂ ಕಥೆ, ಸುನೈಫ್ ಅನುವಾದದಲ್ಲಿ....

    ದುಡಿಯುವ ಜನರ ಐಕ್ಯತೆಯೇ ಕೋಮುವಾದಕ್ಕೆ ಸೂಕ್ತ ಮದ್ದು : ಭಗತ್ ಸಿಂಗ್ ಲೇಖನದ ಅನುವಾದ

    ಚುನಾವಣೆ, ಅಭಿಪ್ರಾಯ ಉತ್ಪಾದನೆ ಮತ್ತು ಮಾರುಕಟ್ಟೆ : ಕನ್ಹಯ್ಯ ಕುಮಾರ್

    ಜನ್ಮದಿನ : ಒಂದು ವೈಕ್ಕಂ ಕಥೆ, ಸುನೈಫ್ ಅನುವಾದದಲ್ಲಿ

    ರಾಜಕೀಯ ನಿಲುವು ವ್ಯಕ್ತಪಡಿಸಿದ ಯುವತಿಗೆ ಜಾತಿನಿಂದನೆ; ಇದಕ್ಕೆ ಕೊನೆ ಇಲ್ಲವೆ?

    ಬಿಜೆಪಿ ಹೇಳುವ 'ಉದ್ದೇಶಪೂರ್ವಕ ಸುಳ್ಳು'ಗಳು

    ಮೂರು ಸಚ್ಚಿದಾನಂದನ್ ಪದ್ಯಗಳು; ಸುನೈಫ್ ಅನುವಾದದಲ್ಲಿ

    ಇಸ್ಲಾಂ : ಧರ್ಮದೊಳಗೆ ಸೈದ್ಧಾಂತಿಕ ಸಂಘರ್ಷ ನಡೆಯಬೇಕಿದೆ...

    ಕ್ರಾಂತದರ್ಶಿತ್ವ ಕೋಮು ಉದ್ವಿಗ್ನತೆಯ ಮನಸ್ಥಿತಿಗೆ ಮದ್ದಾಗಬಲ್ಲದು

    1/10
    Please reload

    ಮೂರು ಸಚ್ಚಿದಾನಂದನ್ ಪದ್ಯಗಳು; ಸುನೈಫ್ ಅನುವಾದದಲ್ಲಿ

    May 5, 2019

    ಇಸ್ಲಾಂ : ಧರ್ಮದೊಳಗೆ ಸೈದ್ಧಾಂತಿಕ ಸಂಘರ್ಷ ನಡೆಯಬೇಕಿದೆ...

    May 3, 2019

    ಕ್ರಾಂತದರ್ಶಿತ್ವ ಕೋಮು ಉದ್ವಿಗ್ನತೆಯ ಮನಸ್ಥಿತಿಗೆ ಮದ್ದಾಗಬಲ್ಲದು

    May 1, 2019

    ಅಮ್ಮ : ವೈಕ್ಕಂ ಕಥೆ, ಸುನೈಫ್ ಅನುವಾದದಲ್ಲಿ....

    May 1, 2019

    ದುಡಿಯುವ ಜನರ ಐಕ್ಯತೆಯೇ ಕೋಮುವಾದಕ್ಕೆ ಸೂಕ್ತ ಮದ್ದು : ಭಗತ್ ಸಿಂಗ್ ಲೇಖನದ ಅನುವಾದ

    May 1, 2019

    ಚುನಾವಣೆ, ಅಭಿಪ್ರಾಯ ಉತ್ಪಾದನೆ ಮತ್ತು ಮಾರುಕಟ್ಟೆ : ಕನ್ಹಯ್ಯ ಕುಮಾರ್

    March 27, 2019

    ಧರ್ಮ, ರಾಷ್ಟ್ರ ಮತ್ತು ಸಾಮಾಜಿಕ ಕ್ರಾಂತಿ ವಿಷಯಗಳಲ್ಲಿ ಭಗತ್ ಸಿಂಗ್ ಮೇಲೆ ಯಾರ ಚಿಂತನೆಗಳ ಪ್ರಭಾವವಿತ್ತು?

    March 22, 2019

    ಬಾಜಿ : ಆಂಟನ್ ಚೆಕೋವ್ ಕಥೆ, ಪುನೀತ್ ಅಪ್ಪು ಅನುವಾದದಲ್ಲಿ...

    March 22, 2019

    ಕ್ರಾಂತಿ, ಅಧಿಕಾರ ಮತ್ತು ಪ್ರಜಾಪ್ರಭುತ್ವ ಕುರಿತು ಭಗತ್ ಸಿಂಗ್ ಮೇಲೆ ಪ್ರಭಾವ ಬೀರಿದ ಚಿಂತನೆಗಳು ಯಾವುವು ಗೊತ್ತೆ?

    March 20, 2019

    ಅಸ್ಪೃಶ್ಯತೆಯ ಸಮಸ್ಯೆ: ಭಗತ್ ಸಿಂಗನ ‘ವಿದ್ರೋಹಿ’ ಬರಹ : ಭಾಗ ~ 2

    March 19, 2019

    Please reload

    Share