M.net4.jpeg
  • ಕವರ್ ಸ್ಟೋರಿ

  • ಸ್ಟೇಟ್ ನ್ಯೂಸ್

  • ದೇಶ - ವಿದೇಶ

  • ಸಿಟಿಜನ್ ರಿಪೋರ್ಟರ್

  • ಅಂಕಣಗಳು

  • ಕಥನ ಕುತೂಹಲ

  • More

    • Facebook Social Icon
    • Twitter Social Icon
    • Google+ Social Icon
    • YouTube Social  Icon
    • Pinterest Social Icon
    • Instagram Social Icon
    RSS Feed
    ದೇಶ

    ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ದೆಹಲಿ ಬಾಲಕಿ ಸಾವು

    July 25, 2016

    ಅದೆಷ್ಟು ಹೆಣ್ಣುಮಕ್ಕಳ ಹೆಣಗಳು ಉರುಳುತ್ತಿದ್ದರೂ ಪುರುಷಪ್ರಧಾನ ಕಾನೂನು ವ್ಯವಸ್ಥೆ ಅತ್ಯಾಚಾರಕ್ಕೆ ಕಠಿಣ ಹಾಗೂ ರಾಜಿಯಿಲ್ಲದ ಶಿಕ್ಷೆ ಜಾರಿಗೊಳಿಸಲು ಇನ್ನೂ ಮೀನಮೇಷ ಎಣಿಸುತ್ತ ಕುಳಿತಿದೆ.

     

    ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ದೆಹಲಿಯ ದಲಿತ ಬಾಲಕಿ ನೆನ್ನೆ ಸಾವನ್ನಪ್ಪಿದ್ದಾಳೆ. ಎರಡು ತಿಂಗಳ ಅವಧಿಯಲ್ಲಿ ಪದೇ ಪದೇ ಅಪಹರಿಸಿ ಒತ್ತೆಯಾಗಿಟ್ಟುಕೊಂಡು ಅತ್ಯಾಚಾರವೆಸಗಿದ್ದ ದುಷ್ಕರ್ಮಿಗಳು ಬಾಲಕಿಗೆ ಆಸಿಡ್’ನಂಥ ದ್ರವವನ್ನು ಕುಡಿಸಿದ್ದರು. ಸಾಮೂಹಿಕ ಅತ್ಯಾಚಾರದ ಫಲವಾಗಿ ದೈಹಿಕವಾಗಿ ತೀವ್ರ ಗಾಯಗೊಂಡಿದ್ದ ಬಾಲಕಿ ಆಸಿಡ್’ನಿಂದಾಗಿ ದಿನವೂ ರಕ್ತ ವಾಂತಿ ಮಾಡಿಕೊಳ್ಳುತ್ತ ದಾರುಣಾವಸ್ಥೆ ತಲುಪಿದ್ದಳು.

     

    ಆಸ್ಪತ್ರೆಯೊಂದರಲ್ಲಿ ಸಫಾಯಿ ಕರ್ಮಚಾರಿಯಾಗಿ ಕೆಲಸ ಮಾಡುತ್ತಿರುವ ಬಾಲಕಿಯ ತಂದೆ ಈ ಹಿಂದೆ ತನ್ನ ಮಗಳ ಮೇಲಾದ ಅತ್ಯಾಚಾರದ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಜುಲೈ 15ರಂದು ವಿವಿಧ ಮಾಧ್ಯಮ ವರದಿಗಳನ್ನು ಆಧರಿಸಿ ದೆಹಲಿ ಮಹಿಳಾ ಆಯೋಗವು ಬಾಲಕಿಯನ್ನು ಲೋಕನಾಯಕ ಜೈಪ್ರಕಾಶ್ ಆಸ್ಪತ್ರೆಯಿಂದ ಮ್ಯಾಕ್ಸ್ ಹಾಸ್ಪಿಟಲ್’ಗೆ ವರ್ಗಾಯಿಸಿ ನೆರವಿಗೆ ಧಾವಿಸಿತ್ತು. ಮತ್ತು ಪ್ರಕರಣ ದಾಖಲಿಸಿಕೊಂಡು ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿತ್ತು. ಆಯೋಗ ನೀಡಿದ ನೋಟಿಸ್ ಅನ್ವಯ ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಲಾಗಿದ್ದು, ಆತನೂ ಜಾಮೀನು ಪಡೆದು ಹೊರಗೆ ಬಂದಿದ್ದಾನೆ. 

     

    ಬಾಲಕಿಯ ತಂದೆ ಮೇ ತಿಂಗಳಲ್ಲಿ ತಮ್ಮ ಕುಟುಂಬಕ್ಕೆ ಅತ್ಯಾಚಾರಿಗಳಿಂದ ಬೆದರಿಕೆ ಇದೆ ಎಂದು ದೂರು ನೀಡಿದ್ದರೂ ದೆಹಲಿ ಪೊಲೀಸರು ಸರಿಯಾಗಿ ಸ್ಪಂದಿಸಿರಲಿಲ್ಲ. SC/ST (ಪ್ರಿವೆನ್ಷನ್ ಆಫ್ ಅಟ್ರಾಸಿಟೀಸ್) ಕಾಯ್ದೆ,1989ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರಲಿಲ್ಲ. ಬಾಲಕಿಯ ಕುಟುಂಬಕ್ಕೆ ಸೂಕ್ತ ರಕ್ಷಣೆ ಒದಗಿಸದೆ ನಿರ್ಲಕ್ಷ್ಯ ತೋರಿದ ಪೊಲೀಸರನ್ನು ದೆಹಲಿ ಮಹಿಳಾ ಆಯೋಗ ತರಾಟೆಗೆ ತೆಗೆದುಕೊಂಡಿದ್ದು, ಆದಷ್ಟು ಶೀಘ್ರದಲ್ಲಿ ಎಲ್ಲ ಆರೋಪಿಗಳನ್ನೂ ಬಂಧಿಸುವಂತೆ ತಾಕೀತು ಮಾಡಿದೆ.

    ಇತ್ತ, ಅದೆಷ್ಟು ಹೆಣ್ಣುಮಕ್ಕಳ ಹೆಣಗಳು ಉರುಳುತ್ತಿದ್ದರೂ ಪುರುಷಪ್ರಧಾನ ಕಾನೂನು ವ್ಯವಸ್ಥೆ ಅತ್ಯಾಚಾರಕ್ಕೆ ಕಠಿಣ ಹಾಗೂ ರಾಜಿಯಿಲ್ಲದ ಶಿಕ್ಷೆ ಜಾರಿಗೊಳಿಸಲು ಇನ್ನೂ ಮೀನಮೇಷ ಎಣಿಸುತ್ತ ಕುಳಿತಿದೆ.

    Tags:

    ಅತ್ಯಾಚಾರ

    ದಲಿತ ಬಾಲಕಿ

    ದೆಹಲಿ

    ಮಹಿಳಾ ಆಯೋಗ

    Please reload

    ಅಮ್ಮ : ವೈಕ್ಕಂ ಕಥೆ, ಸುನೈಫ್ ಅನುವಾದದಲ್ಲಿ....

    ದುಡಿಯುವ ಜನರ ಐಕ್ಯತೆಯೇ ಕೋಮುವಾದಕ್ಕೆ ಸೂಕ್ತ ಮದ್ದು : ಭಗತ್ ಸಿಂಗ್ ಲೇಖನದ ಅನುವಾದ

    ಚುನಾವಣೆ, ಅಭಿಪ್ರಾಯ ಉತ್ಪಾದನೆ ಮತ್ತು ಮಾರುಕಟ್ಟೆ : ಕನ್ಹಯ್ಯ ಕುಮಾರ್

    ಜನ್ಮದಿನ : ಒಂದು ವೈಕ್ಕಂ ಕಥೆ, ಸುನೈಫ್ ಅನುವಾದದಲ್ಲಿ

    ರಾಜಕೀಯ ನಿಲುವು ವ್ಯಕ್ತಪಡಿಸಿದ ಯುವತಿಗೆ ಜಾತಿನಿಂದನೆ; ಇದಕ್ಕೆ ಕೊನೆ ಇಲ್ಲವೆ?

    ಬಿಜೆಪಿ ಹೇಳುವ 'ಉದ್ದೇಶಪೂರ್ವಕ ಸುಳ್ಳು'ಗಳು

    ಮೂರು ಸಚ್ಚಿದಾನಂದನ್ ಪದ್ಯಗಳು; ಸುನೈಫ್ ಅನುವಾದದಲ್ಲಿ

    ಇಸ್ಲಾಂ : ಧರ್ಮದೊಳಗೆ ಸೈದ್ಧಾಂತಿಕ ಸಂಘರ್ಷ ನಡೆಯಬೇಕಿದೆ...

    ಕ್ರಾಂತದರ್ಶಿತ್ವ ಕೋಮು ಉದ್ವಿಗ್ನತೆಯ ಮನಸ್ಥಿತಿಗೆ ಮದ್ದಾಗಬಲ್ಲದು

    1/10
    Please reload

    ಮೂರು ಸಚ್ಚಿದಾನಂದನ್ ಪದ್ಯಗಳು; ಸುನೈಫ್ ಅನುವಾದದಲ್ಲಿ

    May 5, 2019

    ಇಸ್ಲಾಂ : ಧರ್ಮದೊಳಗೆ ಸೈದ್ಧಾಂತಿಕ ಸಂಘರ್ಷ ನಡೆಯಬೇಕಿದೆ...

    May 3, 2019

    ಕ್ರಾಂತದರ್ಶಿತ್ವ ಕೋಮು ಉದ್ವಿಗ್ನತೆಯ ಮನಸ್ಥಿತಿಗೆ ಮದ್ದಾಗಬಲ್ಲದು

    May 1, 2019

    ಅಮ್ಮ : ವೈಕ್ಕಂ ಕಥೆ, ಸುನೈಫ್ ಅನುವಾದದಲ್ಲಿ....

    May 1, 2019

    ದುಡಿಯುವ ಜನರ ಐಕ್ಯತೆಯೇ ಕೋಮುವಾದಕ್ಕೆ ಸೂಕ್ತ ಮದ್ದು : ಭಗತ್ ಸಿಂಗ್ ಲೇಖನದ ಅನುವಾದ

    May 1, 2019

    ಚುನಾವಣೆ, ಅಭಿಪ್ರಾಯ ಉತ್ಪಾದನೆ ಮತ್ತು ಮಾರುಕಟ್ಟೆ : ಕನ್ಹಯ್ಯ ಕುಮಾರ್

    March 27, 2019

    ಧರ್ಮ, ರಾಷ್ಟ್ರ ಮತ್ತು ಸಾಮಾಜಿಕ ಕ್ರಾಂತಿ ವಿಷಯಗಳಲ್ಲಿ ಭಗತ್ ಸಿಂಗ್ ಮೇಲೆ ಯಾರ ಚಿಂತನೆಗಳ ಪ್ರಭಾವವಿತ್ತು?

    March 22, 2019

    ಬಾಜಿ : ಆಂಟನ್ ಚೆಕೋವ್ ಕಥೆ, ಪುನೀತ್ ಅಪ್ಪು ಅನುವಾದದಲ್ಲಿ...

    March 22, 2019

    ಕ್ರಾಂತಿ, ಅಧಿಕಾರ ಮತ್ತು ಪ್ರಜಾಪ್ರಭುತ್ವ ಕುರಿತು ಭಗತ್ ಸಿಂಗ್ ಮೇಲೆ ಪ್ರಭಾವ ಬೀರಿದ ಚಿಂತನೆಗಳು ಯಾವುವು ಗೊತ್ತೆ?

    March 20, 2019

    ಅಸ್ಪೃಶ್ಯತೆಯ ಸಮಸ್ಯೆ: ಭಗತ್ ಸಿಂಗನ ‘ವಿದ್ರೋಹಿ’ ಬರಹ : ಭಾಗ ~ 2

    March 19, 2019

    Please reload

    Share